Image
Breaking News
• ತೊಟ್ಟಿಲು ನಗರಿ ಕಲಘಟಗಿಗೆ ಹೊಸದಿಗಂತ ಪತ್ರಿಕೆ ವರದಿಗಾರ ಗಿರೀಶ್ ಮುಕ್ಕಲ್ಲ ಅವರಿಗೆ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿ. • ಕಲಘಟಗಿ :ನೀವು ಆಶೀರ್ವದಿಸಿದ್ದರಿಂದ ಮೋದಿಜೀ ಸರಕಾರದಲ್ಲಿ ದೇಶ ಸೇವೆ ಮಾಡುತ್ತಿದ್ದೇನೆ. ಪ್ರಲ್ಹಾದ ಜೋಶಿ. • ಡಾ. ಎಸ್ ಜಾನಕಿ ಭೌತಿಕವಾಗಿ ಅಗಲಿದ್ದಾರೆ :ಮಲ್ಲಯ್ಯಸ್ವಾಮಿ.
28 Jul 2026 | 
ಮೊಕದ್ದಮೆ ಇದ್ದರೂ ನಕಲಿ ದಾಖಲೆ ಸೃಷ್ಟಿ ತಳವಾರ  ಆರೋಪ.

ಮೊಕದ್ದಮೆ ಇದ್ದರೂ ನಕಲಿ ದಾಖಲೆ ಸೃಷ್ಟಿ ತಳವಾರ  ಆರೋಪ.



Author : Vinayak M Bhat

ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಲೂ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಸಿದ್ದಪ್ಪ  ತಳವಾರ ಆರೋಪಿಸಿದ್ದಾರೆ.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಾಲೂಕಿನ ರಾಮನಾಳ ಗ್ರಾಮದ ರಿ.ಸ.ನಂ 75ರ 16ಎ. 17 ಗುಂಟೆ ಜಮೀನು ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಆದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮೂಲ ವಾರಸುದಾರರಿಗೆ ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ನಕಲಿ ಸಹಿ ಮಾಡಿ ಬೇರೆಯವರ ಹೆಸರನ್ನು ದಾಖಲಿಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಜ. 17ರಂದು ಪ್ರಕರಣವನ್ನು ದಾಖಲಿಸಲಾಗಿದೆ. ಮೇಲಾಧಿಕಾರಿಗಳು ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಪ್ಪ ಮೇಲಿನಮನಿ, ಹೋಗಪ್ಪ ಆಚಮಟ್ಟಿ, ದೇವರಾಜ್ ತಳವಾರ ಇದ್ದರು.