Image
Breaking News
• ಗೌರಿ ಗಣೇಶ ಹಬ್ಬದ ಶಾಂತಿಸಭೆಯಲ್ಲಿ 500ಕ್ಕೂ ಹೆಚ್ಚು ಜನರು ಭಾಗಿ.ಸಿ ಪಿ ಐ ಶ್ರೀ ಶೈಲ ಕೌಜಲಗಿ ಯವರಿಂದ ಕಾನೂನಿನ ಎಚ್ಚರಿಕೆ, ಶಾಂತಿಯ ಉಪದೇಶ. • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ
11 Sep 2026 | 
ವಿಶೇಷ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಳ್ಳಿ:ಪರಶುರಾಮ್ ಸಾವಂತ.

ವಿಶೇಷ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಳ್ಳಿ:ಪರಶುರಾಮ್ ಸಾವಂತ.



Author : Vinayak M Bhat

ವಿಬಿಜಿ ರಾಮ್ ಜಿ ಯೋಜನೆಯಡಿ ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಲಘಟಗಿ ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಪರಶುರಾಮ್ ಸಾವಂತ ಹೇಳಿದರು.

ಕಚೇರಿಯಲ್ಲಿ ಪತ್ರಿಕಾ ಹೇಳಿಕೆ ನೀಡುವುದರ ಮೂಲಕ ತಿಳಿಸಿದ ಅವರು ಈ ಅವಧಿಯಲ್ಲಿಮನೆ,ಮನೆಗೆ ಭೇಟಿ, ಹೊಸ ಜಾಬ್ ಕಾರ್ಡ್ ವಿತರಣೆ,ಇ ಕೆ ವೈ ಸಿ ಜಾಬ್ ಕಾರ್ಡ್ ನವೀಕರಣ ಸೇರಿದಂತೆ ಗ್ರಾಮೀಣ ಮಟ್ಟದಲ್ಲಿ  ಸಭೆಗಳನ್ನು ಮಾಡಿ ಕಾಮಗಾರಿ ಗುರುತಿಸುವಿಕೆ ಪೋಸ್ಟರ್ ಮತ್ತು ಬ್ಯಾನರ್ ಮುಲಕ ಪ್ರಚಾರ ಮಾಡುವುದು ಇತ್ಯಾದಿ ಕಾರ್ಯಕ್ರಮ ಆಯೋಜಿಸಲಾಗಿದೆ, ಆದರಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು, ರೈತರು ಈ ಜಾಗೃತಿ ಅಭಿಯಾನದ ಪಾಲ್ಗೊಂಡು ಯೋಜನೆ ಯಶಸ್ವಿಗೊಳಿಸಲು ಕೇಳಿಕೊಂಡಿದ್ದಾರೆ.